ಬುಧವಾರ, ನವೆಂಬರ್ 16, 2011

ಲೋಕಾಯುಕ್ತ ಮುಚ್ಚಲು ಬಿಡುವುದಿಲ್ಲ, ಭಾರದ್ವಾಜ್









ಬೆಂಗಳೂರು, ನ 16: ಲೋಕಾಯುಕ್ತ ಸಂಸ್ಥೆ ಮುಚ್ಚುವ ಸಂಬಂಧ ನನ್ನ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಯಾವುದೇ ಕಾರಣಕ್ಕೂ ಲೋಕಾಯುಕ್ತ ಸಂಸ್ಥೆ ಮುಚ್ಚಲು ನಾನು ಬಿಡುವುದಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿಕೆ ನೀಡಿದ್ದಾರೆ. ಸೂಕ್ತ ಅಭ್ಯರ್ಥಿ ಲೋಕಾಯುಕ್ತ ಸ್ಥಾನಕ್ಕೆ ಸಿಗುತ್ತಿಲ್ಲ ಎನ್ನುವುದು ಒಪ್ಪಿಕೊಳ್ಳುವ ಮಾತಲ್ಲ. ಸುಪ್ರೀಂಕೋರ್ಟ್ ವೆಬ್ ಸೈಟ್ ನಲ್ಲಿ ಹುಡುಕಾಟ ನಡೆಸಿದರೆ ಸೂಕ್ತ ಆಯ್ಕೆ ಸಿಗದೇ ಏನು? ಸರಕಾರ ಪೂರ್ಣಪ್ರಮಾಣದಲ್ಲಿ ಈ ಕೆಲಸಕ್ಕೆ ತನ್ನನ್ನು ತೊಡಗಿಸಿಕೊಂಡಿಲ್ಲ ಎನ್ನುವುದೇ ಸತ್ಯ ಎಂದು ರಾಜ್ಯಪಾಲರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಲೋಕಾಯುಕ್ತ ಸಂಬಂಧ ಬೆಳವಣಿಗೆಗಳು ಸಾರ್ವಜನಿಕರ ಮನಸಿನಲ್ಲಿ ಬೇಸರ ತಂದಿದೆ. ಗಾಂವ್ಕರ್ ವರ್ಗಾವಣೆ ನನಗೆ ಬೇಸರ ತಂದಿದೆ. ವರ್ಗಾವಣೆಯಿಂದ ಹಿಡಿದು ಎಲ್ಲಾ ಚಟುವಟಿಕೆಗಳನ್ನು ಗಮನಿಸುತ್ತಿದ್ದೇನೆ. ಲೋಕಾಯುಕ್ತ ಸ್ಥಾನಕ್ಕೆ ರಬ್ಬರ್ ಸ್ಟ್ಯಾಂಪ್ ನಂತ ವ್ಯಕ್ತಿಯನ್ನು ಆರಿಸಿದರೆ ನಾನು ಅದಕ್ಕೆ ಸಮ್ಮತಿಸುವುದಿಲ್ಲ ಎಂದು ಭಾರದ್ವಾಜ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಲೋಕಾಯುಕ್ತ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ನೀಡಿರುವ ಹೇಳಿಕೆಗೆ ಉತ್ತರಿಸುವ ಅಗತ್ಯ ಕಾಣಿಸುವುದಿಲ್ಲ. ಕರ್ನಾಟಕದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯಪಾಲನಾಗಿದ್ದೇನೆ, ಇಲ್ಲಿಯ ರಾಜಕೀಯ ಬೆಳವಣಿಗೆ ನನಗೆ ಬೇಸರ ತಂದಿದೆ ಎಂದು ರಾಜ್ಯಪಾಲರು ಬೇಸರ ವ್ಯಕ್ತ ಪಡಿಸಿದ್ದಾರೆ.












ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ